ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಎಡವಟ್ಟು: ವಿಪರೀತ ಟ್ರೋಲ್

ಬೆಂಗಳೂರು: ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ಮುಖ್ಯಸ್ಥ ತೇಜಸ್ವಿ ಸೂರ್ಯ ಅವರು ಚೆನ್ನೈನಿಂದ ತಿರುಚಿನಾಪಳ್ಳಿಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೊ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ಪ್ರಸಂಗ ಸಾಮಾಜಿಕ ತಾಣಗಳಲ್ಲಿ ವಿಪರೀತ ಟ್ರೋಲ್ಗೆ ತುತ್ತಾಗಿದೆ.
ಹಲವರು ತೇಜಸ್ವಿ ಸೂರ್ಯಾ ಇನ್ನೂ ಹುಡುಗ ಬುದ್ಧಿಯವರು ಎಂದು ಅಣಕವಾಡಿದ್ದಾರೆ. ಟ್ರೋಲ್ಗಳಲ್ಲಿ ಕೆಲವು ಇಲ್ಲಿವೆ.
😂😂😂
Now who did this? pic.twitter.com/GEzxJI0Wqx— Kunal Kamra (@kunalkamra88) January 18, 2023
ತೇಜಸ್ವಿ ಅವರು ತಮಿಳುನಾಡು ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಜೊತೆ ಡಿಸೆಂಬರ್ 10ರಂದು ಚೆನ್ನೈನಿಂದ ತಿರುಚಿನಾಪಳ್ಳಿಗೆ ಹೊರಡಲು ವಿಮಾನ ಏರಿದ್ದರು. ಈ ವೇಳೆ ತುರ್ತು ನಿರ್ಗಮನ ದ್ವಾರದ ‘ಲಿವರ್’ ಎಳೆದಿದ್ದರು. ಕ್ಷಮಾಪಣಾ ಪತ್ರ ನೀಡಿದ ಬಳಿಕ ಅದೇ ವಿಮಾನದಲ್ಲಿ ಪ್ರಯಾಣಿಸಲು ಅವರಿಗೆ ಅನುವು ಮಾಡಿಕೊಡಲಾಗಿತ್ತು.
— Wajid Mohiuddin (@mohiuddinw1) January 18, 2023
ವಿಮಾನಯಾನ ನಿಯಮಾವಳಿಗಳ ಅನುಸಾರ ತುರ್ತು ನಿರ್ಗಮನ ದ್ವಾರ ತೆರೆಯುವುದು ಶಿಕ್ಷಾರ್ಹ ಅಪರಾಧ. ಹೀಗಿದ್ದರೂ ತೇಜಸ್ವಿ ವಿಚಾರದಲ್ಲಿ ಇಂಡಿಗೊ ಹಾಗೂ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮೃದುಧೋರಣೆ ತಳೆದಿರುವುದಕ್ಕೆ ಟೀಕೆ ವ್ಯಕ್ತವಾಗಿದೆ.
Tejasvi Surya in 'emergency exit' controversy. @TheSouthfirst cartoon. #TejasviSurya pic.twitter.com/n0xPg4V51c
— Satish Acharya (@satishacharya) January 18, 2023
ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ಉಂಟುಮಾಡಿದ, ಅವರ ಜೀವದ ಜೊತೆ ಚೆಲ್ಲಾಟವಾಡಿದ್ದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಏಕೆ? ಅಧಿಕಾರಿಗಳು ಈ ವಿಚಾರವನ್ನು ಒಂದು ತಿಂಗಳವರೆಗೂ ಗೌಪ್ಯವಾಗಿ ಇಟ್ಟಿದ್ದರ ಹಿಂದಿನ ಉದ್ದೇಶವೇನು ಎಂದು ವಿಮಾನಯಾನ ತಜ್ಞರು ಪ್ರಶ್ನಿಸಿದ್ದಾರೆ. ತುರ್ತು ನಿರ್ಗಮನ ದ್ವಾರ ತೆರೆದಿದ್ದವರ ವಿರುದ್ಧ ಈ ಹಿಂದೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು ಎಂದೂ ಹೇಳಿದ್ದಾರೆ.
Tejasvi Surya doing mischief in hospital pic.twitter.com/9nH50kLuH4
— Likith (@surfpora) January 18, 2023
‘ಡಿ.10ರಂದು 6ಇ7339 ವಿಮಾನ ದಲ್ಲಿ ನಡೆದಿದ್ದೇನು? ವಿಮಾನಯಾನ ಸಚಿವಾಲಯದಿಂದ ಬಂದ ಒಂದು ಕರೆಯ ಬಳಿಕ ಎಲ್ಲವೂ ತಣ್ಣಗಾಗಿದ್ದೇಕೆ? ಒಬ್ಬನ ಅಚಾತುರ್ಯದಿಂದಾಗಿ ನಾವು 70 ಜನರ ಜೀವ ಕಳೆದುಕೊಳ್ಳಬೇಕಾಗಿತ್ತು’ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಮಂಗಳವಾರ ಟ್ವೀಟ್ ಮಾಡಿದ ಬಳಿಕ ಈ ವಿಚಾರ ಬಹಿರಂಗವಾಗಿದೆ.
Air crew and passengers reaction after Tejasvi Surya opens emergency door#ArrestTejasviSurya pic.twitter.com/H8tr96RI2x
— 👑Che_ಕೃಷ್ಣ🇮🇳 (@ChekrishnaCk) January 18, 2023
ಇದಾಗಿ ಒಂದು ಗಂಟೆಯ ನಂತರ ಡಿಜಿಸಿಎ ಹಾಗೂ ಇಂಡಿಗೊ ಸಂಸ್ಥೆ ಘಟನೆ ನಡೆದಿರುವುದನ್ನು ಒಪ್ಪಿಕೊಂಡಿದ್ದವು. ಆದರೆ ಪ್ರಯಾಣಿಕನ ಹೆಸರು ಬಹಿರಂಗಪಡಿಸಿರಲಿಲ್ಲ. ಚೆನ್ನೈ ವಿಮಾನ ನಿಲ್ದಾಣದ ಮೂಲಗಳು ಹಾಗೂ ಆ ವಿಮಾನದಲ್ಲಿ ಪ್ರಯಾಣಿಸಿದ್ದವರು ಆ ವ್ಯಕ್ತಿ ತೇಜಸ್ವಿ ಸೂರ್ಯ ಎಂದು ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.
‘ಬಸ್ನಲ್ಲಿ ಕುಳಿತಿರುವ ವೇಳೆಯೇ ಸೂರ್ಯ ಕ್ಷಮಾಪಣಾ ಪತ್ರ ಬರೆದು ಅಧಿಕಾರಿಗಳಿಗೆ ನೀಡಿದರು. ಬಳಿಕ ಎಲ್ಲರಿಗೂ ವಿಮಾನದೊಳಗೆ ಬಿಡಲಾಯಿತು. ಸೂರ್ಯ ಹಾಗೂ ಅಣ್ಣಾಮಲೈ ಅವರಿಗೆ ನಿಯೋಜಿತ ಆಸನದ ಬದಲು ಬೇರೆಡೆ ಆಸನದ ವ್ಯವಸ್ಥೆ ಮಾಡಿಕೊಡಲಾಯಿತು’ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
When Modi said 'kitne Tejaswi log hain'... He actually meant it.#tejasvisurya #indigo6e pic.twitter.com/fLpbfiZwfE
— TheNikhil (@vermanikhilv) January 17, 2023
ಪ್ರಕರಣ ಕುರಿತು ಪ್ರತಿಕ್ರಿಯೆ ಪಡೆಯಲು ತೇಜಸ್ವಿ ಸೂರ್ಯ ಅವರನ್ನು ಸಂಪರ್ಕಿಸಲಾಯಿತು. ಅವರು ದೂರವಾಣಿ ಕರೆಗೆ ಲಭ್ಯರಾಗಲಿಲ್ಲ.
ಆಕಸ್ಮಿಕವಾಗಿ ನಡೆದ ಘಟನೆ
‘ವಿಮಾನ ಹೊರಡಲು ಸಿದ್ಧವಾಗಿದ್ದ ವೇಳೆ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ತುರ್ತು ನಿರ್ಗಮನ ದ್ವಾರ ತೆರೆದಿದ್ದರು. ಅದಕ್ಕಾಗಿ ತಕ್ಷಣವೇ ಕ್ಷಮೆ ಕೋರಿದ್ದರು. ಬಳಿಕ ಎಂಜಿನಿಯರ್ಗಳು ಪರಿಶೀಲನೆ ನಡೆಸಿ ವಿಮಾನ ಹಾರಾಟಕ್ಕೆ ಹಸಿರು ನಿಶಾನೆ ತೋರಿದ್ದರು’ ಎಂದು ಇಂಡಿಗೊ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
*
Story behind #TejasviSurya
Emergency gate opening story by " accident " .#HelicopterCrash #Indigopic.twitter.com/EQSMOwrQUR— Yolo 🌈🏹🚜🦄 (@Millennialji) January 18, 2023
ವಿಮಾನವು ಹಾರಾಟ ನಡೆಸಲು ಸಿದ್ಧವಾಗಿದ್ದ ವೇಳೆ ನಮ್ಮನ್ನೆಲ್ಲಾ ಏಕಾಏಕಿ ಕೆಳಗಿಳಿಸಲಾಯಿತು. ಆ ಕ್ಷಣದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಅರ್ಥವಾಗಿರಲಿಲ್ಲ. ಎರಡು ಗಂಟೆ ಬಳಿಕ ವಿಮಾನ ಹಾರಾಟ ನಡೆಸಿತು.
–ಕೆ.ಟಿ.ಅರಸಕುಮಾರ್, ಡಿಎಂಕೆ ವಕ್ತಾರ, ವಿಮಾನದ ಪ್ರಯಾಣಿಕ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.