<p><strong>ನವದೆಹಲಿ</strong>: ವಾಟ್ಸ್ಆ್ಯಪ್ನ ಖಾಸಗಿತನದ ಹೊಸ ನೀತಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಮತ್ತು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ಗೆ ನ್ಯಾಯಾಲಯವು ಬುಧವಾರ ಸೂಚಿಸಿದೆ.</p>.<p>ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್, ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ಪೀಠವು ಕೇಂದ್ರ, ಫೇಸ್ಬುಕ್ ಮತ್ತು ವ್ಯಾಟ್ಸ್ಆ್ಯಪ್ಗೆ ನೋಟಿಸ್ ಜಾರಿ ಮಾಡಿದ್ದು, ಮೇ 13ರೊಳಗೆ ತಮ್ಮ ನಿಲುವನ್ನು ತಿಳಿಸುವಂತೆ ಸೂಚಿಸಿದೆ.</p>.<p>‘ಬಳಕೆದಾರರ ಖಾಸಗಿ ಸಂಭಾಷಣೆಗಳು ಸುರಕ್ಷಿತವಾಗಿದ್ದು, ಅವುಗಳನ್ನು ಎಂಡ್–ಟು–ಎಂಡ್ ಎನ್ಕ್ರಿಪ್ಷನ್ ಮಾಡಲಾಗಿದೆ’ ಎಂದು ವ್ಯಾಟ್ಸ್ಆ್ಯಪ್, ಪೀಠಕ್ಕೆ ತಿಳಿಸಿದೆ.</p>.<p>‘ವ್ಯಾಟ್ಸ್ಆ್ಯಪ್ ಮೇ 15ರಿಂದ ಖಾಸಗಿತನದ ಹೊಸ ನೀತಿಯನ್ನು ಜಾರಿಗೆ ತರಲಿದೆ. ಹಾಗಾಗಿ ನ್ಯಾಯಾಲಯವು ಮಧ್ಯಂತರ ಆದೇಶವನ್ನು ಹೊರಡಿಸಬೇಕು’ ಎಂದು ಅರ್ಜಿದಾರ ಹರ್ಷ ಗುಪ್ತಾ ಅವರು ಮನವಿ ಮಾಡಿದ್ದಾರೆ. ಈ ಬಗೆಗಿನ ಅರ್ಜಿ ವಿಚಾರಣೆಯನ್ನು ಮೇ 13ಕ್ಕೆ ನಿಗದಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಾಟ್ಸ್ಆ್ಯಪ್ನ ಖಾಸಗಿತನದ ಹೊಸ ನೀತಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಮತ್ತು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ಗೆ ನ್ಯಾಯಾಲಯವು ಬುಧವಾರ ಸೂಚಿಸಿದೆ.</p>.<p>ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್, ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ಪೀಠವು ಕೇಂದ್ರ, ಫೇಸ್ಬುಕ್ ಮತ್ತು ವ್ಯಾಟ್ಸ್ಆ್ಯಪ್ಗೆ ನೋಟಿಸ್ ಜಾರಿ ಮಾಡಿದ್ದು, ಮೇ 13ರೊಳಗೆ ತಮ್ಮ ನಿಲುವನ್ನು ತಿಳಿಸುವಂತೆ ಸೂಚಿಸಿದೆ.</p>.<p>‘ಬಳಕೆದಾರರ ಖಾಸಗಿ ಸಂಭಾಷಣೆಗಳು ಸುರಕ್ಷಿತವಾಗಿದ್ದು, ಅವುಗಳನ್ನು ಎಂಡ್–ಟು–ಎಂಡ್ ಎನ್ಕ್ರಿಪ್ಷನ್ ಮಾಡಲಾಗಿದೆ’ ಎಂದು ವ್ಯಾಟ್ಸ್ಆ್ಯಪ್, ಪೀಠಕ್ಕೆ ತಿಳಿಸಿದೆ.</p>.<p>‘ವ್ಯಾಟ್ಸ್ಆ್ಯಪ್ ಮೇ 15ರಿಂದ ಖಾಸಗಿತನದ ಹೊಸ ನೀತಿಯನ್ನು ಜಾರಿಗೆ ತರಲಿದೆ. ಹಾಗಾಗಿ ನ್ಯಾಯಾಲಯವು ಮಧ್ಯಂತರ ಆದೇಶವನ್ನು ಹೊರಡಿಸಬೇಕು’ ಎಂದು ಅರ್ಜಿದಾರ ಹರ್ಷ ಗುಪ್ತಾ ಅವರು ಮನವಿ ಮಾಡಿದ್ದಾರೆ. ಈ ಬಗೆಗಿನ ಅರ್ಜಿ ವಿಚಾರಣೆಯನ್ನು ಮೇ 13ಕ್ಕೆ ನಿಗದಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>