ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ, ಹಿಂದುಳಿದವರು, ದೀನದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಗರ್ಭಿಣಿಯರು, ಬಾಣಂತಿಯರು ಅಷ್ಟೇ ಅಲ್ಲದೇ ತೃತೀಯ ಲಿಂಗದವರಿಗೂ ವಿಭಿನ್ನ ಮತ್ತು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಈ ಕ್ಷೇತ್ರವನ್ನು ಪ್ರತಿನಿಧಿಸುವ ಸಂಸದರು ಮತ್ತು ಹಾಲಿ ಕೇಂದ್ರ ಸಚಿವರು ದೇಶದ ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಾರೆ. ಬಿಜೆಪಿ ಮಾತೃಸಂಸ್ಥೆಯಾದ ಆರ್.ಎಸ್.ಎಸ್ ಕೂಡ ಮೀಸಲಾತಿ ತೆಗೆದುಹಾಕುವಂತೆ ಹೇಳುತ್ತಿದೆ. ಇಂತಹ ಕೋಮುವಾದಿ ಮತ್ತು ಡಾ.ಅಂಬೇಡ್ಕರ್ ಅವರು ಬರೆದ ಸಂವಿಧಾನ ಗೌರವಿಸದ ಬಿಜೆಪಿ ಮತ್ತು ಆ ಪಕ್ಷದ ನಾಯಕರ ಮುಖವಾಡವನ್ನು ಮತದಾರರು ತೆಗೆದುಹಾಕುವ ಸಂಕಲ್ಪ ತೊಡಬೇಕು ಎಂದು ಸಲಹೆ ನೀಡಿದರು.