‘ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮನುಷ್ಯರ ಮೇಲೆ ದಾಳಿ ನಡೆಸಿ ಅಪಾಯಕಾರಿ ಆಗಿರುವ ಹುಲಿ ಸೆರೆಯಾದ ಮೇಲೆ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತೇನೆ. ನನ್ನ ಭೇಟಿಯಿಂದ ಕಾರ್ಯಾಚರಣೆಗೆ ಅಡ್ಡಿ ಆಗಲಿದೆ. ಕಾರ್ಯಾಚರಣೆ ಮುಗಿದ ಮೇಲೆ ಕೊಡಗಿಗೆ ಬರುತ್ತೇನೆ’ ಎಂದು ಅರವಿಂದ ಲಿಂಬಾವಳಿ ಬೆಂಗಳೂರಿನಲ್ಲಿ ಹೇಳಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಮುಖಂಡರು, ‘ತಕ್ಷಣವೇ ಕೊಡಗಿಗೆ ಸಚಿವರು ಬಂದು, ಹುಲಿ ದಾಳಿಯಿಂದ ಆತಂಕಕ್ಕೆ ಒಳಗಾಗಿರುವ ಕಾರ್ಮಿಕರು ಹಾಗೂ ಬೆಳೆಗಾರರಿಗೆ ಧೈರ್ಯ ತುಂಬಬೇಕು’ ಎಂದು ಮನವಿ ಮಾಡಿದ್ದಾರೆ.