ನವದೆಹಲಿ: ಹೊಸ ಮಾಹಿತಿ ತಂತ್ರಜ್ಞಾನ ನಿಯಮ ಅನುಸರಿಸುವಲ್ಲಿ ಟ್ವಿಟರ್ ವಿಫಲವಾಗಿದೆ ಎಂದು ಕೇಂದ್ರ ಸಂವಹನ, ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವಅವರು, ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ವಿಫಲವಾಗಿದ್ದು, ಅನೇಕ ಅವಕಾಶಗಳನ್ನು ನೀಡಿದರೂ ಉದ್ದೇಶಪೂರ್ವಕವಾಗಿ ಪಾಲಿಸದಿರುವ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದ್ದಾರೆ.
ಹೊಸ ಐಟಿ ನಿಯಮವನ್ನು ಟ್ವಿಟರ್ ಅನುಸರಿಸದ ವಿರುದ್ಧ ವಾಗ್ದಾಳಿ ನಡೆಸಿರುವ ರವಿಶಂಕರ್ ಪ್ರಸಾದ್, 'ವಾಕ್ ಸ್ವಾತಂತ್ರ್ಯದಧ್ವಜಧಾರಕ ಎಂದು ಬಿಂಬಿಸಿಕೊಳ್ಳುವ ಟ್ವಿಟರ್, ಮಧ್ಯವರ್ತಿ ಮಾಧ್ಯಮ ಮಾರ್ಗಸೂಚಿಗಳವಿಷಯಕ್ಕೆ ಬಂದಾಗ ಉದ್ದೇಶಪೂರ್ವಕವಾಗಿ ಧಿಕ್ಕರಿಸುವ ಮಾರ್ಗವನ್ನು ಆರಿಸಿರುವುದು ಆಶ್ಚರ್ಯಕರವೆನಿಸಿದೆ' ಎಂದು ಹೇಳಿದ್ದಾರೆ.
There are numerous queries arising as to whether Twitter is entitled to safe harbour provision. However, the simple fact of the matter is that Twitter has failed to comply with the Intermediary Guidelines that came into effect from the 26th of May.
— Ravi Shankar Prasad (@rsprasad) June 16, 2021
'ಸುರಕ್ಷಿತ ನಿಮಯಗಳಿಗೆ ಟ್ವಿಟರ್ ಅರ್ಹತೆ ಹೊಂದಿದೆಯೇ ಎಂಬುದರ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ವಿಷಯವಾಗಿ ಹೇಳಬೇಕೆಂದರೆ ಮೇ 26ರಿಂದ ಜಾರಿಗೆ ಬಂದ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ಟ್ವಿಟರ್ ವಿಫಲವಾಗಿದೆ' ಎಂದು ರವಿಶಂಕರ್ ತಿಳಿಸಿದ್ದಾರೆ.
ಟ್ವಿಟರ್ಗೆ ಹಲವಾರು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಅವುಗಳನ್ನೆಲ್ಲ ಉದ್ದೇಶಪೂರ್ವಕವಾಗಿ ಧಿಕ್ಕರಿಸಿದೆ ಎಂದು ರವಿಶಂಕರ್ ಆರೋಪಿಸಿದ್ದಾರೆ.
ಇದನ್ನೂ ಓದಿ:ನಿಯಮ ಪಾಲಿಸಲು ವಿಳಂಬ: ಕಾನೂನು ರಕ್ಷಣೆ ಕಳೆದುಕೊಳ್ಳಲಿದೆ ಟ್ವಿಟರ್
ಇಲ್ಲಿ ಗಮನಾರ್ಹ ಸಂಗತಿಯೆಂದರೆ ದೇಶದ ಕಾನೂನು ನಿರಾಕರಿಸುವ ಮೂಲಕ ಬಳಕೆದಾರರ ಕುಂದು ಕೊರತೆಗಳನ್ನು ಪರಿಹರಿಸಲು ಟ್ವಿಟರ್ ವಿಫಲವಾಗಿದೆ. ಅಲ್ಲದೆ ಮಾಧ್ಯಮವನ್ನು ದುರುಪಯೋಗಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.
However, if any foreign entity believes that they can portray itself as the flag bearer of free speech in India to excuse itself from complying with the law of the land, such attempts are misplaced.
— Ravi Shankar Prasad (@rsprasad) June 16, 2021
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.