‘ಉಗ್ರರ ನೇಮಕಾತಿ, ಅಶ್ಲೀಲ ಮಾಹಿತಿಯ ಪ್ರಸಾರ, ಸೌಹಾರ್ದಕ್ಕೆ ಧಕ್ಕೆ ತರುವ ವಿಷಯಗಳನ್ನು ಹಂಚಿಕೊಳ್ಳುವುದು, ಹಣಕಾಸು ವಂಚನೆ, ಹಿಂಸೆಗೆ ಪ್ರಚೋದನೆ, ಕಾನೂನು–ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೃತ್ಯಗಳಿಗೆ ಸಾಮಾಜಿಕ ಮಾಧ್ಯಮಗಳು, ಡಿಜಿಟಲ್ ವೇದಿಕೆಗಳು ಬಳಕೆಯಾಗುತ್ತಿದ್ದವು. ಇದಕ್ಕೆ ಕಡಿವಾಣ ಹಾಕುವುದು ಅಗತ್ಯವಿತ್ತು’ ಎಂದು ಉತ್ತರಿಸುವ ಮೂಲಕ ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.