ಲಖನೌ: ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕೆಲ ಸನ್ಯಾಸಿಗಳು ನೀಡಿದ್ದ ‘ದ್ವೇಷ ಭಾಷಣ’ವೊಂದು ಭಾರಿ ಸದ್ದು ಮಾಡಿತ್ತು. ಈ ಭಾಷಣದಲ್ಲಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಶಸ್ತ್ರವನ್ನು ಕೈಗೆತ್ತಿಕೊಳ್ಳುವಂತೆ ಯುವಕರಿಗೆ ಕರೆ ನೀಡಲಾಗಿತ್ತು. ಇದೀಗ ಅಂಥದ್ದೇ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.