<p><strong>ಲಖನೌ: </strong>ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕೆಲ ಸನ್ಯಾಸಿಗಳು ನೀಡಿದ್ದ ‘ದ್ವೇಷ ಭಾಷಣ’ವೊಂದು ಭಾರಿ ಸದ್ದು ಮಾಡಿತ್ತು. ಈ ಭಾಷಣದಲ್ಲಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಶಸ್ತ್ರವನ್ನು ಕೈಗೆತ್ತಿಕೊಳ್ಳುವಂತೆ ಯುವಕರಿಗೆ ಕರೆ ನೀಡಲಾಗಿತ್ತು. ಇದೀಗ ಅಂಥದ್ದೇ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಉತ್ತರ ಪ್ರದೇಶದ ಸೋನೆಭದ್ರಾ ಜಿಲ್ಲೆಯಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಮಕ್ಕಳ ಗುಂಪೊಂದು ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ರಕ್ತದ ಕೊನೆ ಹನಿ ಇರುವವರೆಗೂ ಹೋರಾಡುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲುರಕ್ತದ ಕೊನೆಯ ಹನಿಯವರೆಗೂ ನಾವು ಹೋರಾಡುತ್ತೇವೆ. ನಮ್ಮ ಗುರಿ ತಲುಪಲು ಪ್ರಾಣ ತ್ಯಾಗ ಮಾಡಲು ನಾವು ಸಿದ್ಧ. ಅವಶ್ಯಕತೆ ಬಿದ್ದಲ್ಲಿ ಸಾಯಿಸಲೂ ಹಿಂಜರಿಯುವುದಿಲ್ಲ ಎಂದು ಮಕ್ಕಳು ಪ್ರತಿಜ್ಞೆ ಮಾಡಿರುವುದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.</p>.<p>‘ವಿಡಿಯೊವನ್ನು ಪಾರ್ಕ್ವೊಂದರಲ್ಲಿ ಚಿತ್ರೀಕರಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕೆಲ ಸನ್ಯಾಸಿಗಳು ನೀಡಿದ್ದ ‘ದ್ವೇಷ ಭಾಷಣ’ವೊಂದು ಭಾರಿ ಸದ್ದು ಮಾಡಿತ್ತು. ಈ ಭಾಷಣದಲ್ಲಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಶಸ್ತ್ರವನ್ನು ಕೈಗೆತ್ತಿಕೊಳ್ಳುವಂತೆ ಯುವಕರಿಗೆ ಕರೆ ನೀಡಲಾಗಿತ್ತು. ಇದೀಗ ಅಂಥದ್ದೇ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಉತ್ತರ ಪ್ರದೇಶದ ಸೋನೆಭದ್ರಾ ಜಿಲ್ಲೆಯಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಮಕ್ಕಳ ಗುಂಪೊಂದು ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ರಕ್ತದ ಕೊನೆ ಹನಿ ಇರುವವರೆಗೂ ಹೋರಾಡುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲುರಕ್ತದ ಕೊನೆಯ ಹನಿಯವರೆಗೂ ನಾವು ಹೋರಾಡುತ್ತೇವೆ. ನಮ್ಮ ಗುರಿ ತಲುಪಲು ಪ್ರಾಣ ತ್ಯಾಗ ಮಾಡಲು ನಾವು ಸಿದ್ಧ. ಅವಶ್ಯಕತೆ ಬಿದ್ದಲ್ಲಿ ಸಾಯಿಸಲೂ ಹಿಂಜರಿಯುವುದಿಲ್ಲ ಎಂದು ಮಕ್ಕಳು ಪ್ರತಿಜ್ಞೆ ಮಾಡಿರುವುದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.</p>.<p>‘ವಿಡಿಯೊವನ್ನು ಪಾರ್ಕ್ವೊಂದರಲ್ಲಿ ಚಿತ್ರೀಕರಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>