<p class="title"><strong>ನವದೆಹಲಿ</strong>: ಖಾಸಗೀತನ ಕುರಿತ ಪರಿಷ್ಕೃತ ನೀತಿಗೆ ಬಳಕೆದಾರರು ಸಮ್ಮತಿ ಸೂಚಿಸಲು ನಿಗದಿಪಡಿಸಿದ್ದ ಮೇ 15ರ ಗಡುವನ್ನು ವಾಟ್ಸ್ಆ್ಯಪ್ ಕೈಬಿಟ್ಟಿದೆ. ಸಮ್ಮತಿ ಸೂಚಿಸದಿದ್ದರೂ ಬಳಕೆದಾರರ ಖಾತೆ ರದ್ದು ಆಗುವುದಿಲ್ಲ ಎಂದು ತಿಳಿಸಿದೆ.</p>.<p class="title">ಖಾಸಗೀತನ ಕುರಿತ ನೂತನ ನೀತಿಗೆ ಬಳಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ವಾಟ್ಸ್ಆ್ಯಪ್ ತನ್ನ ಮಾತೃ ಸಂಸ್ಥೆ ಫೇಸ್ಬುಕ್ ಜೊತೆಗೆ ಬಳಕೆದಾರರ ಮಾಹಿತಿಗಳನ್ನು ಹಂಚಿಕೆ ಮಾಡಿಕೊಳ್ಳಬಹುದು ಎಂಬ ಆತಂಕವು ವ್ಯಕ್ತವಾಗಿತ್ತು.</p>.<p class="title">ಸುದ್ದಿಸಂಸ್ಥೆಯ ಜೊತೆಗೆ ಮಾತನಾಡಿದ ವಾಟ್ಸ್ಆ್ಯಪ್ ಜಾಲತಾಣದ ವಕ್ತಾರರು, ‘ಪರಿಷ್ಕೃತ ನೀತಿಗೆ ಒಪ್ಪಿಗೆ ಸೂಚಿಸದೇ ಇದ್ದರೂ ಯಾವುದೇ ಬಳಕೆದಾರರ ಖಾತೆಯೂ ಮೇ 15ರಂದು ರದ್ದಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p class="title">ಆದರೆ, ಪರಿಷ್ಕೃತ ನೀತಿ ಕುರಿತಂತೆ ಮುಂದಿನ ಇನ್ನು ಕೆಲವು ವಾರಗಳು ಬಳಕೆದಾರರಿಗೆ ಆಗಾಗ್ಗೆ ನೆನಪಿನ ಸಂದೇಶಗಳು ರವಾನೆ ಆಗಲಿವೆ ಎಂದೂ ಹೇಳಿದರು.</p>.<p class="title">ಈಗ ಗಡುವು ಕೈಬಿಟ್ಟಿರುವ ತೀರ್ಮಾನಕ್ಕೆ ನಿಖರ ಕಾರಣ ಹಾಗೂ ಪರಿಷ್ಕೃತ ನೀತಿಯನ್ನು ಒಪ್ಪದೇ ಇರುವ ಗ್ರಾಹಕರ ಸಂಖ್ಯೆ ಎಷ್ಟು ಎಂಬುದನ್ನು ಸಂಸ್ಥೆ ಸ್ಪಷ್ಟಪಡಿಸಿಲ್ಲ. ಪರಿಷ್ಕೃತ ನೀತಿ ಕುರಿತು ಸಂಸ್ಥೆ ಕಳೆದ ಜನವರಿಯಲ್ಲಿ ವಿವರ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಖಾಸಗೀತನ ಕುರಿತ ಪರಿಷ್ಕೃತ ನೀತಿಗೆ ಬಳಕೆದಾರರು ಸಮ್ಮತಿ ಸೂಚಿಸಲು ನಿಗದಿಪಡಿಸಿದ್ದ ಮೇ 15ರ ಗಡುವನ್ನು ವಾಟ್ಸ್ಆ್ಯಪ್ ಕೈಬಿಟ್ಟಿದೆ. ಸಮ್ಮತಿ ಸೂಚಿಸದಿದ್ದರೂ ಬಳಕೆದಾರರ ಖಾತೆ ರದ್ದು ಆಗುವುದಿಲ್ಲ ಎಂದು ತಿಳಿಸಿದೆ.</p>.<p class="title">ಖಾಸಗೀತನ ಕುರಿತ ನೂತನ ನೀತಿಗೆ ಬಳಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ವಾಟ್ಸ್ಆ್ಯಪ್ ತನ್ನ ಮಾತೃ ಸಂಸ್ಥೆ ಫೇಸ್ಬುಕ್ ಜೊತೆಗೆ ಬಳಕೆದಾರರ ಮಾಹಿತಿಗಳನ್ನು ಹಂಚಿಕೆ ಮಾಡಿಕೊಳ್ಳಬಹುದು ಎಂಬ ಆತಂಕವು ವ್ಯಕ್ತವಾಗಿತ್ತು.</p>.<p class="title">ಸುದ್ದಿಸಂಸ್ಥೆಯ ಜೊತೆಗೆ ಮಾತನಾಡಿದ ವಾಟ್ಸ್ಆ್ಯಪ್ ಜಾಲತಾಣದ ವಕ್ತಾರರು, ‘ಪರಿಷ್ಕೃತ ನೀತಿಗೆ ಒಪ್ಪಿಗೆ ಸೂಚಿಸದೇ ಇದ್ದರೂ ಯಾವುದೇ ಬಳಕೆದಾರರ ಖಾತೆಯೂ ಮೇ 15ರಂದು ರದ್ದಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p class="title">ಆದರೆ, ಪರಿಷ್ಕೃತ ನೀತಿ ಕುರಿತಂತೆ ಮುಂದಿನ ಇನ್ನು ಕೆಲವು ವಾರಗಳು ಬಳಕೆದಾರರಿಗೆ ಆಗಾಗ್ಗೆ ನೆನಪಿನ ಸಂದೇಶಗಳು ರವಾನೆ ಆಗಲಿವೆ ಎಂದೂ ಹೇಳಿದರು.</p>.<p class="title">ಈಗ ಗಡುವು ಕೈಬಿಟ್ಟಿರುವ ತೀರ್ಮಾನಕ್ಕೆ ನಿಖರ ಕಾರಣ ಹಾಗೂ ಪರಿಷ್ಕೃತ ನೀತಿಯನ್ನು ಒಪ್ಪದೇ ಇರುವ ಗ್ರಾಹಕರ ಸಂಖ್ಯೆ ಎಷ್ಟು ಎಂಬುದನ್ನು ಸಂಸ್ಥೆ ಸ್ಪಷ್ಟಪಡಿಸಿಲ್ಲ. ಪರಿಷ್ಕೃತ ನೀತಿ ಕುರಿತು ಸಂಸ್ಥೆ ಕಳೆದ ಜನವರಿಯಲ್ಲಿ ವಿವರ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>