ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮದ ರಜನಿಕಾಂತ್ ಅವರು ಕಳೆದು ಹೋದ ತಮ್ಮ ಫೋನ್ ವಿವರಗಳನ್ನು ಸಿಇಐಆರ್ ಪೋರ್ಟಲ್ನಲ್ಲಿ ನಮೂದಿಸಿದ್ದರು. ಅವರ ಮೊಬೈಲ್ ಫೋನ್ ಬೇರೆಯವರು ಉಪಯೋಗಿಸುತ್ತಿರುವುದನ್ನು ವೆಬ್ಸೈಟ್ ಮೂಲಕ ಐಮಂಗಲ ಪೊಲೀಸ್ ಠಾಣೆ ಪಿಎಸ್ಐ ಸುರೇಶ್ ಹಾಗೂ ಸಿಬ್ಬಂದಿ ಮೋಹನ್ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾಲೀಕರಿಗೆ ಹಸ್ತಾಂತರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಎಆರ್ ಡಿವೈಎಸ್ಪಿ ಎಸ್.ಎಸ್. ಗಣೇಶ, ಎಎಸ್ಐ (ಗಣಕಯಂತ್ರ) ರಾಘವೇಂದ್ರ, ಪಿಎಸ್ಐ ಗುಡ್ಡಪ್ಪ, ಕಂಪ್ಯೂಟರ್ ಅಪರೇಟರ್ ನಟರಾಜ್ ಇದ್ದರು.