‘ಯಾವುದೇ ಅಭ್ಯರ್ಥಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ, ಎರಡರಲ್ಲೂ ಗೆದ್ದಿರುವ ಸಾಕಷ್ಟು ನಿದರ್ಶನಗಳಿವೆ. ಅಂತಹ ಸಂದರ್ಭದಲ್ಲಿ ಅಭ್ಯರ್ಥಿ ಎರಡರಲ್ಲಿ ಒಂದು ಕ್ಷೇತ್ರದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಹೀಗೆ ತೆರವಾದ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವುದಕ್ಕೆ ಭಾರಿ ವೆಚ್ಚವಾಗುತ್ತದೆ. ಆದ್ದರಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಬೇಕು’ ಎಂದು ದೆಹಲಿಯ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.