ಬೆಂಗಳೂರು: ಸಚಿವ ಸಂಪುಟದ ವಿಸ್ತರಣೆ ಇನ್ನು ಎರಡು– ಮೂರು ದಿನಗಳಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಿತ್ರ ಪಕ್ಷಗಳಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಅವರು ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಖಾತೆಗೆ ಪಟ್ಟು: ಖಾತೆ ಹಂಚಿಕೆ ಹಗ್ಗ ಜಗ್ಗಾಟ ಮುಂದುವರಿದಿದ್ದು, ಹಣಕಾಸು ಮತ್ತು ಜಲ ಸಂಪನ್ಮೂಲ ಖಾತೆಗೆ ಪಟ್ಟು ಹಿಡಿಯುಲು ಜೆಡಿಎಸ್ ತೀರ್ಮಾನಿಸಿದೆ.
ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಬುಧವಾರ ಸಂಜೆ ನಡೆದ ಪಕ್ಷದ ಶಾಸಕರು ಮತ್ತು ಮುಖಂಡರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಣಕಾಸು ಖಾತೆ ನಮ್ಮ ಪಕ್ಷಕ್ಕೇ ಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.