ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು(ಸಬ್ ಕಾ ಸಾತ್, ಸಬ್ ಕಾ ವಿಕಾಸ್) ಎಂಬ ವಾಣಿಯನ್ನು ರಾಷ್ಟ್ರಕವಿ ಕುವೆಂಪು ಅವರು ಕೊಟ್ಟಿದ್ದಾರೆ. ಇದು ನಮ್ಮ ಆಶಯ. ಕಾಂಗ್ರೆಸ್ ಜಾತಿ ವಿಭಜಿಸುವ ಕೆಲಸ ಮಾಡುತ್ತಿದೆ. ಉತ್ತರ ದಕ್ಷಿಣ, ಸಂಪ್ರದಾಯ, ಸಂಸ್ಕೃತಿ ಹೆಸರಲ್ಲಿ ವಿಭಜಿಸುತ್ತಿದೆ. ಜಾತಿ ಮತದ ಆಧಾರದ ಮೇಲೆ ಅಪರಾಧಿಗಳನ್ನು ನಿರ್ಧೋಷಿಗಳು ಎಂದು ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಅವರು, ಬಿಜೆಪಿ ಕಾರ್ಯಕರ್ತರ ಹತ್ಯೆಯಾಗುತ್ತಿದೆ ಇದಕ್ಕೆ ಯಾರು ಹೊಣೆ ಎಂದು ಕಾಂಗ್ರೆಸ್ಗೆ ಕೇಳುತ್ತೇನೆ. ಕೋಮುವಾದ ಮಾಡುತ್ತಿರುವವರು ಯಾರು ಎಂದು ಪ್ರಶ್ನಿಸಿದರು.