ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ಬಾಬು, ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ನಾಮಪತ್ರ ಸಲ್ಲಿಸಿದರು. ಕೆಜಿಎಫ್ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಅಶ್ವಿನಿ ಸಂಪಂಗಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ರೂಪಾ ಶಶಿಧರ್, ಸಿಪಿಎಂನಿಂದ ಪಿ.ತಂಗರಾಜು, ಆರ್ಪಿಐನಿಂದ ಮಾಜಿ ಶಾಸಕ ಎಸ್.ರಾಜೇಂದ್ರನ್, ಕರ್ನಾಟಕ ಜನತಾ ಪಕ್ಷದಿಂದ (ಕೆಜೆಪಿ) ಗಗನಾ ಸುಖನ್ಯಾ, ಕೆಪಿಜೆಪಿಯಿಂದ ಪಿ.ನಂದಿನಿ ಮತ್ತು ವಳ್ಳಲ್ ಮುನಿಸ್ವಾಮಿ ನಾಮಪತ್ರ ಸಲ್ಲಿಸಿದರು.