‘ಬಿರುಕು ಬಿಟ್ಟಿರುವ ಹಳಿಯ ಉಕ್ಕಿನ ಪಟ್ಟಿಯನ್ನು ಹೊರತೆಗೆದು ಬೇರೆ ಪಟ್ಟಿಯನ್ನು ಜೋಡಿಸಬೇಕಾಗುತ್ತದೆ. ದುರಸ್ತಿ ಕಾರ್ಯದ ವೇಳೆ ಈ ಮಾರ್ಗದ ವಿದ್ಯುತ್ ಪೂರೈಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಬೇಕಾಗುತ್ತದೆ. ಹಾಗಾಗಿ ಮೂರು ನಿಲ್ದಾಣಗಳಲ್ಲಿ ಸೇವೆಯನ್ನು ಸ್ಥಗಿತಗೊಳಿಸಬೇಕಾಗುತ್ತದೆ’ ಎಂದು ನಿಗಮದ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಂಕರ್ ‘ಪ್ರಜಾವಾಣಿ’ಗೆ ತಿಳಿಸಿದರು.