ಈ ವಿಷಯವನ್ನು ಖುಷ್ಬೂ ಅವರು X ತಾಣದಲ್ಲಿ ಹಂಚಿಕೊಂಡಿದ್ದು, ‘ವಿಷ್ಣುಮಾಯಾ ದೇವಸ್ಥಾನದವರು ನಾರಿಪೂಜೆಗೆ ನನ್ನನ್ನು ಆಮಂತ್ರಿಸಿದ್ದು ನಿಜಕ್ಕೂ ನನ್ನ ಅದೃಷ್ಠ. ಇದಕ್ಕಾಗಿ ನಾನು ವಿನೀತಳಾಗಿದ್ದೇನೆ. ಇಂತಹ ಗೌರವವನ್ನು ನೀಡಿದ್ದಕ್ಕೆ ದೇವಸ್ಥಾನಕ್ಕೆ ನಾನು ನಮಿಸುವೆ. ಕೆಟ್ಟದನ್ನು ಅಳಿಸಿ ಒಳ್ಳೆಯದನ್ನು ಪಸರಿಸಲು ಹಾಗೂ ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ. ನಾರಿಪೂಜೆಯಿಂದ ಮನುಕುಲಕ್ಕೆ ಒಳ್ಳೆಯದಾಗಲಿ’ ಎಂದು ಬರೆದುಕೊಂಡಿದ್ದಾರೆ.
ಸ್ವರ್ಗದಿಂದಲೇ ದೇವತೆ ಬಂದು ಪಾದಪೂಜೆ ಮಾಡಿಸಿಕೊಳ್ಳುತ್ತಾಳೆ ಎಂದು ನಾರಿ ಪೂಜೆ ಬಗೆಗೆ ದೇವಸ್ಥಾನದ ಪೂಜಾರಿಗಳ ನಂಬುಗೆಯಾಗಿದೆ.
1970 ರಲ್ಲಿ ಮುಂಬೈ ಮೂಲದ ಕುಟುಂಬದಲ್ಲಿ ಜನಿಸಿದ್ದ ಖುಷ್ಬೂ ಅವರ ಬಾಲ್ಯದ ಹೆಸರು ನಖತ್ ಖಾನ್. ನಟಿಯಾಗಿ, ನಿರ್ಮಾಪಕಿ, ರಾಜಕಾರಣಿಯಾಗಿ ಹೆಸರು ಮಾಡಿರುವ ಅವರು ಬಿಜೆಪಿ ಸೇರಿ ಕಳೆದ ಫೆಬ್ರುವರಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.