ಬೆಳಗಾವಿ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಗವಾಡದಲ್ಲಿ ಕ್ಷೇತ್ರದ ಉಪ ಚುನಾವಣಾ ಪ್ರಚಾರ ಸಭೆಯಲ್ಲಿ ಈಚೆಗೆ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೊಡೆದಿದ್ದ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದೆ.
ಸಿದ್ದರಾಮಯ್ಯ ಅವರು, ‘ಇಂದಿರಾಗಾಂಧಿ ದೇಶಕ್ಕೋಸ್ಕರ ಪ್ರಾಣ ತೆತ್ತರು’ ಎನ್ನುತ್ತಿದ್ದಂತೆಯೇ, ಜನರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬ ‘ಹೌದು ಹುಲಿಯ’ ಎಂದಿದ್ದರು.