ರಾಮನಗರ: ತಾಲ್ಲೂಕಿನ ಬಿಡದಿ ಬಳಿಯ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕಿಗೆ ಬುಧವಾರ ಮಧ್ಯಾಹ್ನ ನುಗ್ಗಿದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಪಕ್ಕದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಿರತೆಯು ಪಾರ್ಕಿನ ಒಳಗೆ ಪ್ರವೇಶಿಸಿತ್ತು.
ಅಡಗಿ ಕುಳಿತಿದ್ದ ಚಿರತೆಯ ಸೆರೆಗಾಗಿ ಧಾವಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ತಮ್ಮ ನಿರಂತರ ಕಾರ್ಯಾಚರಣೆ ಮೂಲಕ ಚಿರತೆಯನ್ನು ಹಿಡಿದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.