ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಖರೀದಿಸುವವರಿಗೆ ಪಡಿತರ ನಿಲ್ಲಿಸಬೇಕೆಂದು ನಾನು ಹೇಳಿಲ್ಲ: ಟಾಟಾ ಸ್ಪಷ್ಟನೆ

Last Updated 3 ಸೆಪ್ಟೆಂಬರ್ 2021, 12:27 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಮದ್ಯ ಮಾರಾಟಕ್ಕೆ ಆಧಾರ್ ಕಾರ್ಡ್ ಬಳಕೆ ಮಾಡಬೇಕು ಮತ್ತು ಮದ್ಯ ಕೊಳ್ಳುವವರಿಗೆ ಸರ್ಕಾರದ ಆಹಾರ, ಸಬ್ಸಿಡಿ ರದ್ದುಪಡಿಸಬೇಕು ಎಂಬ ಹೇಳಿಕೆಯನ್ನು ನಾನು ಯಾವತ್ತೂ ನೀಡಿಲ್ಲ ಎಂದು ಉದ್ಯಮಿ ರತನ್ ಟಾಟಾ ಸ್ಪಷ್ಟಪಡಿಸಿದ್ದಾರೆ.

ರತನ್ ಟಾಟಾ ಅವರ ಹೆಸರಿನಲ್ಲಿ ಸಾಮಾಜಿಕ ತಾಣಗಳಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ಅದರಲ್ಲಿ, ಮದ್ಯ ಖರೀದಿಸುವವರಿಗೆ ಸರ್ಕಾರದ ಆಹಾರ ಸಬ್ಸಿಡಿ ಸ್ಥಗಿತಗೊಳಿಸಬೇಕು ಎಂಬ ಹೇಳಿಕೆಯಿದೆ. ಅಲ್ಲದೆ, ಯಾರಿಗೆ ಮದ್ಯ ಕೊಳ್ಳುವ ಸಾಮರ್ಥ್ಯವಿದೆಯೋ, ಅವರು ಖಂಡಿತವಾಗಿಯೂ ಆಹಾರ ಖರೀದಿಸಲು ಸಮರ್ಥರಿರುತ್ತಾರೆ ಎಂದು ರತನ್ ಟಾಟಾ ಅವರು ಹೇಳಿದ್ದಾರೆ ಎಂದು ಬಿಂಬಿಸಲಾಗಿದೆ.

ಆದರೆ, ಈ ಸಂದೇಶ ಮತ್ತು ಫೋಟೊ ನಕಲಿಯಾಗಿದ್ದು, ಅಂತಹ ಯಾವುದೇ ಹೇಳಿಕೆ ನಾನು ನೀಡಿಲ್ಲ ಎಂದು ಸ್ವತಃ ರತನ್ ಟಾಟಾ ಅವರೇ ಸ್ಪಷ್ಟಪಡಿಸಿದ್ದಾರೆ.

ರತನ್ ಟಾಟಾ ಹೇಳಿಕೆ ನಕಲಿ ಎಂಬ ಸ್ಪಷ್ಟನೆ
ರತನ್ ಟಾಟಾ ಹೇಳಿಕೆ ನಕಲಿ ಎಂಬ ಸ್ಪಷ್ಟನೆ

ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಸ್ಟೋರೀಸ್‌ನಲ್ಲಿ ಟಾಟಾ ಅವರು ಈ ವಿಚಾರ ಹಂಚಿಕೊಂಡಿದ್ದಾರೆ. ಜತೆಗೆ ಇದೊಂದು ಸುಳ್ಳು ಸುದ್ದಿ ಎಂದು ಕೂಡ ಟಾಟಾ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT