<p><strong>ಬೆಂಗಳೂರು:</strong> ಗಾಯಗೊಂಡ ಮಗನ ಆರೋಗ್ಯದ ಕುರಿತು ಹಂಚಿಕೊಂಡಿದ್ದ ಬೆಂಗಳೂರು ಮೂಲದ ವ್ಯಕ್ತಿಯ ಪೋಸ್ಟ್ಗೆ ಗೂಗಲ್ ಸಿಇಒ ಸುಂದರ ಪಿಚೈ ಪ್ರತಿಕ್ರಿಯಿಸಿದ್ದಾರೆ. ಸದ್ಯ ಈ ವಿಚಾರ ಇಂಟರ್ನೆಟ್ನಲ್ಲಿ ಸಂಚಲನ ಮೂಡಿಸಿದ್ದು, ಪಿಚೈ ವಿನಮ್ರ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಬೆಂಗಳೂರಿನ ಅಶುತೋಷ್ ಶ್ರೀವಾಸ್ತವ ಎನ್ನುವವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ‘ನಮ್ಮ ಮಗ ಈಥನ್ ಸುಧಾರಿಸಿಕೊಳ್ಳುತ್ತಿದ್ದಾನೆ, ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದ’ ಎಂದು ಬರೆದುಕೊಂಡಿದ್ದರು. </p><p>ಇದಕ್ಕೆ ಪ್ರತಿಕ್ರಿಯಿಸಿರುವ ಸುಂದರ ಪಿಚೈ, ‘ಆತ ಆರೋಗ್ಯವಾಗಿದ್ದು ಸಂತೋಷವಾಯಿತು’ ಎಂದಿದ್ದಾರೆ. ಇದಕ್ಕೆ ಉತ್ತರಿಸಿರುವ ಅಶುತೋಷ್ ‘ಧನ್ಯವಾದ, ಆತ ಧೈರ್ಯವಂತ’ ಎಂದಿದ್ದಾರೆ. </p><p>ಗೂಗಲ್ ಸಿಇಒ ಜನಸಾಮಾನ್ಯರೊಂದಿಗೆ ಸಂವಹನ ನಡೆಸಿರುವುದಕ್ಕೆ ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>‘ಸುಂದರ್ ಅವರು ಜನಪರ ವ್ಯಕ್ತಿ’ ಎಂದು ನೆಟ್ಟಿಗರೊಬ್ಬರು ಹೇಳಿದ್ದರೆ, ಇನ್ನೊಬ್ಬರು ಬಾಲಕನ ಕುರಿತು ‘ಅದೃಷ್ಟವಂತ’ ಎಂದಿದ್ದಾರೆ.</p><p>ಮಗ ಈಥನ್ ಗಾಯಗೊಂಡಿರುವ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದ ಅಶುತೋಷ್, ‘ಮಗನಿಗೆ ನೆಲದ ಮೇಲೆ ಬಿದ್ದು ತಲೆಗೆ ಪೆಟ್ಟಾಗಿತ್ತು. ತಕ್ಷಣ ಚಿಕಿತ್ಸೆಗೆ ಕರೆದೊಯ್ದಾಗ ಶಸ್ತ್ರ ಚಿಕಿತ್ಸೆ ಮಾಡಬೇಕೆಂದರು. ಎಲ್ಲ ಪ್ರಕ್ರಿಯೆಗಳೂ ಮುಗಿದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಾಯಗೊಂಡ ಮಗನ ಆರೋಗ್ಯದ ಕುರಿತು ಹಂಚಿಕೊಂಡಿದ್ದ ಬೆಂಗಳೂರು ಮೂಲದ ವ್ಯಕ್ತಿಯ ಪೋಸ್ಟ್ಗೆ ಗೂಗಲ್ ಸಿಇಒ ಸುಂದರ ಪಿಚೈ ಪ್ರತಿಕ್ರಿಯಿಸಿದ್ದಾರೆ. ಸದ್ಯ ಈ ವಿಚಾರ ಇಂಟರ್ನೆಟ್ನಲ್ಲಿ ಸಂಚಲನ ಮೂಡಿಸಿದ್ದು, ಪಿಚೈ ವಿನಮ್ರ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಬೆಂಗಳೂರಿನ ಅಶುತೋಷ್ ಶ್ರೀವಾಸ್ತವ ಎನ್ನುವವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ‘ನಮ್ಮ ಮಗ ಈಥನ್ ಸುಧಾರಿಸಿಕೊಳ್ಳುತ್ತಿದ್ದಾನೆ, ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದ’ ಎಂದು ಬರೆದುಕೊಂಡಿದ್ದರು. </p><p>ಇದಕ್ಕೆ ಪ್ರತಿಕ್ರಿಯಿಸಿರುವ ಸುಂದರ ಪಿಚೈ, ‘ಆತ ಆರೋಗ್ಯವಾಗಿದ್ದು ಸಂತೋಷವಾಯಿತು’ ಎಂದಿದ್ದಾರೆ. ಇದಕ್ಕೆ ಉತ್ತರಿಸಿರುವ ಅಶುತೋಷ್ ‘ಧನ್ಯವಾದ, ಆತ ಧೈರ್ಯವಂತ’ ಎಂದಿದ್ದಾರೆ. </p><p>ಗೂಗಲ್ ಸಿಇಒ ಜನಸಾಮಾನ್ಯರೊಂದಿಗೆ ಸಂವಹನ ನಡೆಸಿರುವುದಕ್ಕೆ ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>‘ಸುಂದರ್ ಅವರು ಜನಪರ ವ್ಯಕ್ತಿ’ ಎಂದು ನೆಟ್ಟಿಗರೊಬ್ಬರು ಹೇಳಿದ್ದರೆ, ಇನ್ನೊಬ್ಬರು ಬಾಲಕನ ಕುರಿತು ‘ಅದೃಷ್ಟವಂತ’ ಎಂದಿದ್ದಾರೆ.</p><p>ಮಗ ಈಥನ್ ಗಾಯಗೊಂಡಿರುವ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದ ಅಶುತೋಷ್, ‘ಮಗನಿಗೆ ನೆಲದ ಮೇಲೆ ಬಿದ್ದು ತಲೆಗೆ ಪೆಟ್ಟಾಗಿತ್ತು. ತಕ್ಷಣ ಚಿಕಿತ್ಸೆಗೆ ಕರೆದೊಯ್ದಾಗ ಶಸ್ತ್ರ ಚಿಕಿತ್ಸೆ ಮಾಡಬೇಕೆಂದರು. ಎಲ್ಲ ಪ್ರಕ್ರಿಯೆಗಳೂ ಮುಗಿದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>