ಉಡುಪಿ: ಕಾರ್ಕಳ ತಾಲೂಕಿನ ಕಲಂಬಾಡಿ ಪದವು ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಮನಸ್ವಿ ಕುಲಾಲ್ ಮೌಲ್ಯ ಶಿಕ್ಷಣ ಕುರಿತು ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷರ ಮೆಕಾಲೆ ಶಿಕ್ಷಣ ಪದ್ಧತಿಯೇ ನಮ್ಮಲ್ಲಿ ಮಾನವೀಯ ಮೌಲ್ಯಗಳ ಸವಕಳಿಗೆ ಕಾರಣ ಎಂದು ಮನಸ್ವಿ ಪ್ರತಿಪಾದಿಸಿದ್ದಾರೆ.
ಮಹರ್ಷಿ ಅರವಿಂದ್, ವಿವೇಕಾನಂದ, ರವೀಂದ್ರನಾಥ್ ಟಾಗೋರ್ರ ಶಿಕ್ಷಣ ಪದ್ಧತಿ ಜಾರಿಯಾಗಬೇಕಿತ್ತು ಎಂದು ಮನಸ್ವಿ ಕುಲಾಲ್ ಅಭಿಪ್ರಾಯಪಟ್ಟಿದ್ದಾರೆ. ವೃದ್ಧಾಶ್ರಮದಲ್ಲಿ ಹಿರಿಯರನ್ನು ಭೇಟಿ ಮಾಡಿರುವ ಅನುಭವಗಳನ್ನು ಮನಸ್ವಿ ವಿಡಿಯೊದಲ್ಲಿ ಹಂಚಿಕೊಂಡಿದ್ದಾರೆ.