ಕೆಲವು ಪ್ರಕರಣಗಳನ್ನು ಪರಿಶೀಲಿಸುವ ಸಲುವಾಗಿ ಸೆ. 8ರಂದು ರಾತ್ರಿ 9 ಗಂಟೆ ಸುಮಾರಿಗೆ ಎಸ್ಪಿ ಗೌರವ್ ಮಂಗ್ಲಾ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಿರಿಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡಿದ್ದ ಗೌರವ್, ತಪ್ಪು ಮಾಡಿದವರನ್ನು ಲಾಕಪ್ನಲ್ಲಿ ಇರಿಸುವಂತೆ ಹೇಳಿದ್ದರು. ಆದರೆ, ಏನು ತಪ್ಪು ಮಾಡಿದ್ದರೂ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.