<p><strong>ಬೆಂಗಳೂರು:</strong> ಟಿಪ್ಪು ಜನ್ಮದಿನವನ್ನು ಕೋಮುಸೌಹಾರ್ದ ದಿನವನ್ನಾಗಿ ಆಚರಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಬೇಕು ಎಂದು ಅಖಿಲ ಕರ್ನಾಟಕ ಸೂಫಿ ಸಂತರ ಸಂಘದ ಅಧ್ಯಕ್ಷ ಸೂಫಿ ವಲಿಬಾ ಒತ್ತಾಯಿಸಿದರು.</p>.<p>ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಬಳಿ ಸಂಘವು ಶುಕ್ರವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ 220ನೇ ಹುತಾತ್ಮ ದಿನಾಚರಣೆಯಲ್ಲಿ ಮಾತನಾಡಿದರು.</p>.<p>'ರಾಜ್ಯವನ್ನು ಉಳಿಸಿಕೊಳ್ಳಲು ಬ್ರಿಟಿಷರೊಂದಿಗೆ ಕೆಚ್ಚೆದೆಯಿಂದ ಹೋರಾಡಿದ ಧೀರ ಟಿಪ್ಪು ಸುಲ್ತಾನ್. ಇಂಥ ಮಹಾತ್ಮರ ವಿರುದ್ಧ ಮೂಲಭೂತವಾದಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಕಿವಿಗೊಡದೆ ಸೌಹಾರ್ದದ ಸಂಕೇತವಾಗಿ ಕಾಣಬೇಕು’ ಎಂದು ಹೇಳಿದರು.</p>.<p>‘ನಾಸಾ ಮತ್ತು ಆಕ್ಸ್ಫರ್ಡ್ ಗ್ರಂಥಾಲಯಗಳಲ್ಲಿ ಟಿಪ್ಪು ಸಾಧನೆಗಳ ಕುರಿತು ಪುಸ್ತಕಗಳಿವೆ. ಟಿಪ್ಪು ಹೆಸರಿನಲ್ಲಿ ಹೊರ ದೇಶಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ದೇಶಕ್ಕಾಗಿ ತನ್ನ ಇಬ್ಬರು ಮಕ್ಕಳನ್ನು ಒತ್ತೆ ಇಟ್ಟಿದ್ದರು. ಟಿಪ್ಪು ಅನನ್ಯ ಸಾಧನೆಗಳ ಬಗ್ಗೆ ಇಂದಿನ ಮಕ್ಕಳಿಗೆ ವಿವರಿಸಬೇಕು’ ಎಂದರು.</p>.<p>ಶ್ರೀಕೋಟೆ ವೆಂಕಟರಮಣ ದೇವಸ್ಥಾನದ ಅರ್ಚಕ ಶ್ರೀರಂಗ ಭಟ್ ಅವರು ಟಿಪ್ಪು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಟಿಪ್ಪು ಜನ್ಮದಿನವನ್ನು ಕೋಮುಸೌಹಾರ್ದ ದಿನವನ್ನಾಗಿ ಆಚರಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಬೇಕು ಎಂದು ಅಖಿಲ ಕರ್ನಾಟಕ ಸೂಫಿ ಸಂತರ ಸಂಘದ ಅಧ್ಯಕ್ಷ ಸೂಫಿ ವಲಿಬಾ ಒತ್ತಾಯಿಸಿದರು.</p>.<p>ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಬಳಿ ಸಂಘವು ಶುಕ್ರವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ 220ನೇ ಹುತಾತ್ಮ ದಿನಾಚರಣೆಯಲ್ಲಿ ಮಾತನಾಡಿದರು.</p>.<p>'ರಾಜ್ಯವನ್ನು ಉಳಿಸಿಕೊಳ್ಳಲು ಬ್ರಿಟಿಷರೊಂದಿಗೆ ಕೆಚ್ಚೆದೆಯಿಂದ ಹೋರಾಡಿದ ಧೀರ ಟಿಪ್ಪು ಸುಲ್ತಾನ್. ಇಂಥ ಮಹಾತ್ಮರ ವಿರುದ್ಧ ಮೂಲಭೂತವಾದಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಕಿವಿಗೊಡದೆ ಸೌಹಾರ್ದದ ಸಂಕೇತವಾಗಿ ಕಾಣಬೇಕು’ ಎಂದು ಹೇಳಿದರು.</p>.<p>‘ನಾಸಾ ಮತ್ತು ಆಕ್ಸ್ಫರ್ಡ್ ಗ್ರಂಥಾಲಯಗಳಲ್ಲಿ ಟಿಪ್ಪು ಸಾಧನೆಗಳ ಕುರಿತು ಪುಸ್ತಕಗಳಿವೆ. ಟಿಪ್ಪು ಹೆಸರಿನಲ್ಲಿ ಹೊರ ದೇಶಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ದೇಶಕ್ಕಾಗಿ ತನ್ನ ಇಬ್ಬರು ಮಕ್ಕಳನ್ನು ಒತ್ತೆ ಇಟ್ಟಿದ್ದರು. ಟಿಪ್ಪು ಅನನ್ಯ ಸಾಧನೆಗಳ ಬಗ್ಗೆ ಇಂದಿನ ಮಕ್ಕಳಿಗೆ ವಿವರಿಸಬೇಕು’ ಎಂದರು.</p>.<p>ಶ್ರೀಕೋಟೆ ವೆಂಕಟರಮಣ ದೇವಸ್ಥಾನದ ಅರ್ಚಕ ಶ್ರೀರಂಗ ಭಟ್ ಅವರು ಟಿಪ್ಪು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>