<p><strong>ವಿಜಯಪುರ: </strong>ಶೌಚಾಲಯ ನಿರ್ಮಿಸಿಕೊಂಡ ಪ್ರತಿ ಕುಟುಂಬ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಹಾಂತಮ್ಮ ಬಿರಾದಾರ ಹೇಳಿದರು.</p>.<p>ತಾಲ್ಲೂಕಿನ ಜಂಬಗಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ವತಿಯಿಂದ ಶೌಚಾಲಯ ನಿರ್ಮಾಣ ಮತ್ತು ಬಳಕೆ ಕುರಿತು ಏರ್ಪಡಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರ್ಕಾರದ ಸೌಲಭ್ಯ ಪಡೆದುಕೊಂಡು ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಗಳು ಕೇವಲ ಶೌಚಾಲಯಗಳನ್ನು ನಿರ್ಮಿಸಿಕೊಂಡರೆ ಸಾಲದು ಕಡ್ಡಾಯವಾಗಿ ಬಳಸಬೇಕು. ಅಂದರೆ ಮಾತ್ರ ಸರ್ಕಾರದ ಯೋಜನೆಗೆ ಮಹತ್ವ ಬರಲು ಸಾಧ್ಯ. ಬಳಸದಿದ್ದರೆ ಸರ್ಕಾರದ ಅನುದಾನ ವ್ಯರ್ಥವಾಗುವ ಜತೆಗೆ ಪರಿಸರ ಹಾನಿಗೆ ಕಾರಣವಾಗುತ್ತದೆ ಎಂದರು.</p>.<p>ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಬಂಡೆಪ್ಪ ತೇಲಿ ಮಾತನಾಡಿದರು. ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಂಗಮೇಶ ಗುದಳೆ, ಮುಖ್ಯೋಪಾಧ್ಯಾಯ ಎಂ.ಕೆ.ಆಕಳವಾಡಿ, ಮಲ್ಲಪ್ಪ ವಾಲಿಕಾರ ಸೇರಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು. ಪ್ರಕಾಶ ಹಚಡದ ಸ್ವಾಗತಿಸಿದರು. ಗುರು ಅರಕೇರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಶೌಚಾಲಯ ನಿರ್ಮಿಸಿಕೊಂಡ ಪ್ರತಿ ಕುಟುಂಬ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಹಾಂತಮ್ಮ ಬಿರಾದಾರ ಹೇಳಿದರು.</p>.<p>ತಾಲ್ಲೂಕಿನ ಜಂಬಗಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ವತಿಯಿಂದ ಶೌಚಾಲಯ ನಿರ್ಮಾಣ ಮತ್ತು ಬಳಕೆ ಕುರಿತು ಏರ್ಪಡಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರ್ಕಾರದ ಸೌಲಭ್ಯ ಪಡೆದುಕೊಂಡು ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಗಳು ಕೇವಲ ಶೌಚಾಲಯಗಳನ್ನು ನಿರ್ಮಿಸಿಕೊಂಡರೆ ಸಾಲದು ಕಡ್ಡಾಯವಾಗಿ ಬಳಸಬೇಕು. ಅಂದರೆ ಮಾತ್ರ ಸರ್ಕಾರದ ಯೋಜನೆಗೆ ಮಹತ್ವ ಬರಲು ಸಾಧ್ಯ. ಬಳಸದಿದ್ದರೆ ಸರ್ಕಾರದ ಅನುದಾನ ವ್ಯರ್ಥವಾಗುವ ಜತೆಗೆ ಪರಿಸರ ಹಾನಿಗೆ ಕಾರಣವಾಗುತ್ತದೆ ಎಂದರು.</p>.<p>ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಬಂಡೆಪ್ಪ ತೇಲಿ ಮಾತನಾಡಿದರು. ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಂಗಮೇಶ ಗುದಳೆ, ಮುಖ್ಯೋಪಾಧ್ಯಾಯ ಎಂ.ಕೆ.ಆಕಳವಾಡಿ, ಮಲ್ಲಪ್ಪ ವಾಲಿಕಾರ ಸೇರಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು. ಪ್ರಕಾಶ ಹಚಡದ ಸ್ವಾಗತಿಸಿದರು. ಗುರು ಅರಕೇರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>