ಉಪರಾಷ್ಟ್ರಪತಿ ಇಂದು ಮೈಸೂರಿಗೆ

ಮೈಸೂರು: ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶುಕ್ರವಾರ ಮೈಸೂರಿಗೆ ಆಗಮಿಸಲಿದ್ದಾರೆ.
13ರಂದು ಬೆಳಿಗ್ಗೆ 9 ಗಂಟೆಗೆ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ (ಆರ್ಐಇ) ‘ಡಾ.ಎಸ್.ರಾಧಾಕೃಷ್ಣನ್ ಅಡಿಟೋರಿಯಂ’ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
10 ಗಂಟೆಗೆ, ಸಿಐಐಎಲ್ ಸುವರ್ಣ ಮಹೋತ್ಸವದ ಸಮಾರೋಪದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರೂ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.