ಹಲ್ಲೆ ವಿಷಯ ತಿಳಿದು ಗ್ರಾಮಕ್ಕೆ ಕೆಲವು ದಿನಗಳ ಹಿಂದೆ ಬಂದಿದ್ದ ಭರತೇಶ ವಿಡಿಯೊ ಮಾಡಿದ್ದಾರೆ. ‘ತಂದೆ ಮೇಲೆ ಕಿಣಯೆ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ್ದಾರೆ. ಬಿಡಿಸಲು ಬಂದ ತಂಗಿ, ತಾಯಿಯನ್ನೂ ಥಳಿಸಿದ್ದಾರೆ. ಪೊಲೀಸರು ಈ ಬಗ್ಗೆ ದೂರು ತಗೆದುಕೊಂಡಿರಲಿಲ್ಲ. ತಂದೆ, ತಾಯಿ, ತಂಗಿಯನ್ನು ಆಸ್ಪತ್ರೆಗೆ ಕರೆ ತಂದಾಗ ಕಿಡಿಗೇಡಿಗಳು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನ ಜಖಂಗೊಳಿಸಿದ್ದಾರೆ. ಮನೆಯೊಳಗಿನ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಆರೋಪಿಸಿದ್ದಾರೆ. ಬಳಿಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ.