ಬಾಗಲಕೋಟೆ: ಕಳೆದೊಂದು ವಾರದಿಂದ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಬೆಳಗಾವಿ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆಗೆ ₹ 550 ಕೋಟಿ ಹಾನಿಯಾಗಿದೆ. ಇಲಾಖೆಗೆ ಸಂಬಂಧಿಸಿದಂತೆ ಹಾನಿಯಾಗಿರುವ ಕಟ್ಟಡ, ರಸ್ತೆ, ಸೇತುವೆಗಳ ತಾತ್ಕಾಲಿಕ ದುರಸ್ತಿಗೆ ತಕ್ಷಣ ₹ 50 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.