ದೀಪಾವಳಿ ಬಂತೆಂದರೆ ಸಾಕು ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಲು ಆರಂಭಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರಭಾವವಿರುವ ಈ ನೆಲದಲ್ಲಿ ಕೋಟೆ ಕಟ್ಟುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ. ಶಿವಾಜಿ ಮಹಾರಾಜರ ಸಾಹಸ, ಧೈರ್ಯ, ದೇಶಭಕ್ತಿ ಮತ್ತು ಧ್ಯೇಯಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಪರಿಚಯಿಸುವ ಕಾರ್ಯ ಈ ಮೂಲಕ ನಡೆಯುತ್ತದೆ.