ರಾಜ್ಯದಲ್ಲಿ ಬಹಳ ಚರ್ಚೆಗೆ, ಆಕ್ರೋಶಕ್ಕೆ ಕಾರಣವಾಗಿದ್ದ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದ ರೈಲು ಹಳಿಯ ಮೇಲೆ ಅರ್ಬಾಜ್ ಮುಲ್ಲಾ ಎಂಬ ಯುವಕನ ಶವ ಪತ್ತೆಯಾಗಿತ್ತು. ಈ ಯುವಕ ಪ್ರೀತಿಸುತ್ತಿದ್ದ ಯುವತಿಯ ತಂದೆ–ತಾಯಿಯೇ ಸುಪಾರಿ ಕೊಟ್ಟು ಈ ಕೊಲೆ ಮಾಡಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ.