ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿ ‘ವೆಂಟಿಲೇಟರ್’ಗಳು ಇದ್ದರೂ ಅರಿವಳಿಕೆ ತಜ್ಞರು, ತಂತ್ರಜ್ಞರು, ಆಮ್ಲಜನಕದ ಕೊರತೆಯಿಂದಾಗಿ ನಿರುಪಯುಕ್ತವಾಗಿವೆ. ಸಾಕಷ್ಟು ವೈದ್ಯರು, ಸಿಬ್ಬಂದಿ ಇಲ್ಲ. ವೈದ್ಯರು ಸೂಚಿಸಿದರೂ ಗ್ರಾಮಗಳಲ್ಲಿ ಬಹುತೇಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ. ಮಲೆನಾಡು ಭಾಗದಲ್ಲಿ ಸೋಂಕಿತರನ್ನು ಆಸ್ಪತ್ರೆಗಳಿಗೆ ಒಯ್ಯಲು ಹರಸಾಹಸಪಡಬೇಕಾದ ಸ್ಥಿತಿ ಇದೆ.