ಎಲೆಮರೆಯ ಕಾಯಿಯಂತೆ ಇದ್ದು, ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ ಮಹನೀಯರನ್ನು, ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಪ್ರಜಾವಾಣಿ ಸಾಧಕರು-2023’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದಾವಣಗೆರೆ, ಶಿವಮೊಗ್ಗ ಮತ್ತು ಚಿತ್ರದುರ್ಗ ಜಿಲ್ಲೆಯ 23 ಜನ ಸಾಧಕರಿಗೆ ಪ್ರಶಸ್ತಿ ಫಲಕ ಹಾಗೂ ಶ್ಲಾಘನಾ ಪತ್ರವನ್ನು ವಿತರಿಸಲಾಯಿತು.