ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿಯ ಗಣೇಶೋತ್ಸವ ಉತ್ತರ ಕರ್ನಾಟಕದ ಪ್ರಮುಖ ಆಕರ್ಷಣೆ. ಗ್ರಾಮದ ಕುಲಕರ್ಣಿ ಮನೆತನದವರು 195 ವರ್ಷಗಳಿಂದ ಪ್ರತಿಷ್ಠಾಪಿಸಿಕೊಂಡು ಬಂದಿರುವ ಕೆಂಪು ಅಥವಾ ಸಿಂಧೂರ ಗಣೇಶ ಮೂರ್ತಿಗಳ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬರುತ್ತಾರೆ. ಬಲಗೈಯಲ್ಲಿ ಮುರಿದ ದಂತ, ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ ಉಳಿದೆರಡು ಕೈಗಳಲ್ಲಿ ಆಯುಧಗಳನ್ನು ಹೊಂದಿರುವುದು ಇಲ್ಲಿನ ಗಣಪತಿಗಳ ವಿಶೇಷವಾಗಿದೆ.