ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ವರುಣನ ಅಬ್ಬರಕ್ಕೆ ತಗ್ಗುಪ್ರದೇಶದಲ್ಲಿದ್ದ ಮನೆ-ಅಂಗಡಿಗಳಿಗೆ ನೀರು ನುಗ್ಗಿದ್ದು, ವಾಣಿಜ್ಯ ಸಂಕೀರ್ಣಗಳು, ಅಪಾರ್ಟ್ಮೆಂಟ್ ಗಳ ತಳಮಹಡಿಗಳು ಜಲಾವೃತಗೊಂಡಿವೆ. ಕಟ್ಟಿಕೊಂಡ ಒಳ ಚರಂಡಿ ಮತ್ತು ಅಲ್ಲಲ್ಲಿ ತೆರೆದುಕೊಂಡ ಮ್ಯಾನ್ಹೋಲ್ಗಳಿಂದಾಗಿ ಹಲವೆಡೆ ರಸ್ತೆಗಳು ಹಳ್ಳದಂತಾಗಿವೆ.