ಶ್ರೀಕಂಠೇಶ್ವರ ದೇವಸ್ಥಾನದ ಸ್ನಾನಘಟ್ಟದ ಮೆಟ್ಟಿಲುಗಳು ಮುಳುಗಡೆಯಾಗಿದ್ದು, ಪುಣ್ಯಸ್ನಾನ ನಿರ್ಬಂಧಿಸಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ. ಗುರುಪೂರ್ಣಿಮೆ ದಿನವಾಗಿದ್ದರಿಂದ ಶನಿವಾರ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರು ಬಂದಿದ್ದರು. ಪುಣ್ಯ ಸ್ನಾನ ಮತ್ತು ಮುಡಿ ಸೇವೆ ತಾತ್ಕಾಲಿಕವಾಗಿ ನಿಷೇಧಿಸಿರುವುದರಿಂದ ಭಕ್ತರು ಪರದಾಡುವ ಸ್ಥಿತಿ ಎದುರಾಯಿತು.