ತುಂಗ, ಭದ್ರಾ ನದಿಗಳ ಸಂಗಮ ಕ್ಷೇತ್ರ ಕೂಡಲಿಯಲ್ಲಿ ಲಾಕ್ಡೌನ್ಗೂ ಮೊದಲೇ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿದ್ದರೂ ಅಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೂ ಜನರಲ್ಲಿ ಭೀತಿ ಇಲ್ಲ. ಮಾಸ್ಕ್ ಹಾಕುವುದಿಲ್ಲ, ಅಂತರ ಕಾಪಾಡಿಕೊಳ್ಳುತ್ತಿಲ್ಲ. ಇನ್ನು ಭದ್ರಾವತಿ ತಾಲ್ಲೂಕಿನ ಪುಟ್ಟ ಗ್ರಾಮ ಅರಹತೊಳಲುವಿನಲ್ಲಿ 39 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಮೂವರು ಕೋವಿಡ್ನಿಂದ ಮೃತಪಟ್ಟಿದ್ದಾರೆ.