ತುಮಕೂರು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಪಾವಗಡ ತಾಲ್ಲೂಕಿನ ವೆಂಕಟಾಪುರದ ಬಳಿ ಬುಧವಾರ ಹಳ್ಳದ ನೀರಿನಲ್ಲಿ ಸಿಲುಕಿದ್ದ ಬಸ್ ಮತ್ತು ಪ್ರಯಾಣಿಕರನ್ನು ರಕ್ಷಿಸಲಾಯಿತು. ಶಿರಾ ತಾಲ್ಲೂಕಿನ ದೊಡ್ಡ ಬಾಣಗೆರೆ ಗ್ರಾಮದ ಕೆರೆಗೆ ಎರಡು ವರ್ಷದ ಹಿಂದೆ ನಿರ್ಮಾಣ ಮಾಡಿದ್ದ ಕಟ್ಟೆ ಹಾಗೂ ಚೆಕ್ ಡ್ಯಾಂ ಒಡೆದು ಜಮೀನುಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.