<p><strong>ಉಡುಪಿ:</strong> ಮಳೆಯ ಕಾರಣಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಡಿಡಿಪಿಐ ಎನ್.ಎಚ್.ನಾಗೂರ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಬೈಂದೂರು ತಾಲ್ಲೂಕಿನ ಕುರುದ್ವೀಪಕ್ಕೆ ತೆರಳಿ ಅಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ದೋಣಿಯ ಸಹಾಯದಿಂದ ಪರೀಕ್ಷಾ ಕೇಂದ್ರಕ್ಕೆ ಕರೆತಂದರು.</p>.<p>ಭಾರಿ ಮಳೆಗೆ ಮರವಂತೆ ಸಮೀಪದ ಕುರುದ್ವೀಪ ಜಲಾವೃತಗೊಂಡು ಸಾರಿಗೆ ಸಂಪರ್ಕ ಕಡಿದುಕೊಂಡಿತ್ತು. ನೆರೆಯ ನಡುವೆಯೇ ದ್ವೀಪದಲ್ಲಿದ್ದ ಶಿಲ್ಪಾ ಹಾಗೂ ಸಂಜನಾ ಎಂಬ ವಿದ್ಯಾರ್ಥಿನಿಯರು ಜುಲೈ 19ರಂದು ದೋಣಿಯಲ್ಲಿ ಬಂದು ಪರೀಕ್ಷೆ ಬರೆದಿದ್ದರು. ಈ ವಿಚಾರ ತಿಳಿದ ಡಿಡಿಪಿಐ ಗುರುವಾರ ಬೆಳಿಗ್ಗೆ ಬೈಂದೂರು ತಹಶೀಲ್ದಾರ್ ಹಾಗೂ ಬಿಇಒ ಜತೆ ದ್ವೀಪಕ್ಕೆ ತೆರಳಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು. ನಂತರ ದೋಣಿಯಲ್ಲಿ ದಡಕ್ಕೆ ಕರೆತಂದು ಅಲ್ಲಿಂದ ಇಲಾಖೆಯ ವಾಹನದಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>