ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ವಾಸವಿರುವ ನೂರಾರು ಕುಟುಂಬಗಳು ವನ್ಯಜೀವಿಗಳೊಂದಿಗೆ ಸದಾ ಸಂಘರ್ಷಕ್ಕೆ ಒಳಗಾಗುತ್ತಿವೆ. ಅದರಿಂದ ಪಾರು ಮಾಡುವ ಹಾಗೂ ಕುಟುಂಬಗಳಿಗೆ ಉತ್ತಮ ಬದುಕು ಕಟ್ಟಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಪುನರ್ವಸತಿ ಪ್ಯಾಕೇಜ್ ಪ್ರಕಟಿಸಿದ್ದು, ಹಲವು ಕುಟುಂಬಗಳು ಕಾಡು ತೊರೆದು ಬರುತ್ತಿವೆ.