ಏತ ನೀರಾವರಿ ಯೋಜನೆ ಕಾಲಮಿತಿಯೊಳಗೆ ಅನುಷ್ಠಾನಗೊಂಡರೆ ತುಂಗಭದ್ರೆಯ ನೀರು ಹೊಸಪೇಟೆ ತಾಲ್ಲೂಕಿನ 11 ಗ್ರಾಮಗಳಿಗೆ ತಲುಪಬೇಕಿತ್ತು. ಆದರೆ ಇಚ್ಛಾಶಕ್ತಿಯ ಕೊರತೆಯಿಂದ ಅದು ಸಾಧ್ಯವಾಗಿಲ್ಲ. ಈ ತಾಲ್ಲೂಕಿನ ಮಳೆಯಾಶ್ರಿತ ಪ್ರದೇಶಕ್ಕೆ ನೀರು ಹರಿಸುವ ಉದ್ದೇಶ ಎಂದು ಸಾಕಾರಗೊಳ್ಳುತ್ತದೋ ಎಂದು ಕಾಯುತ್ತಿದ್ದಾರೆ ರೈತರು.