ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ‘ಬಸವ ನಾಡು’ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡಿ ಸಾವು, ನೋವು ತಂದಿದೆ. ಕೋವಿಡ್ ಲಸಿಕೆ ತೆಗೆದುಕೊಂಡೇ ಜನ ಸಾಯುತ್ತಿದ್ದಾರೆ ಎಂಬ ತಪ್ಪು ಕಲ್ಪನೆ ಜೊತೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ ಬಗ್ಗೆ ತಪ್ಪು ಸಂದೇಶ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಹರಿದಾಡುತ್ತಿದೆ.