ಹೈದರಾಬಾದ್: ಪವನ್ ಕಲ್ಯಾಣ್ ಅಭಿನಯದ ಚಿತ್ರಪ್ರದರ್ಶನ ಸ್ಥಗಿತಗೊಳಿಸಿದ್ದಕ್ಕೆ ಅಭಿಮಾನಿಗಳು ಚಿತ್ರಮಂದಿರ ಧ್ವಂಸಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಜೋಗುಳಾಂಬಾ ಗದ್ವಾಲ್ನಲ್ಲಿ ಪವನ್ ಕಲ್ಯಾಣ್ ಅಭಿನಯದ ಚಿತ್ರ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇದರಿಂದ ಕೋಪಗೊಂಡ ಅಭಿಮಾನಿಗಳು ಚಿತ್ರಮಂದಿರದ ಬಾಗಿಲುಗಳನ್ನು ಮುರಿದು, ಕೈಗೆ ಸಿಕ್ಕ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.