ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಚಿತ್ರಮಂದಿರದಲ್ಲಿ ನಟ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ‘ವಕೀಲ್ ಸಾಬ್’ ಚಿತ್ರದ ಟ್ರೇಲರ್ ಬಿಡುಗಡೆಯ ಸಂದರ್ಭದಲ್ಲಿ ದಾಂಧಲೆ ನಡೆಸಲಾಗಿದೆ. ಅಭಿಮಾನಿಗಳು ಕಾರ್ಯಕ್ರಮದ ಸಂಭ್ರಮಾಚರಣೆಗೆ ಮುಂದಾಗಿದ್ದರು. ಆದರೆ, ಸಂಗಮ್ ಚಿತ್ರಮಂದಿರದ ಸಿಬ್ಬಂದಿ ಅವಕಾಶ ನೀಡದ ಹಿನ್ನೆಲೆಯಲ್ಲಿ ದಾಂಧಲೆ ನಡೆಸಿದ್ದಾರೆ. ಗದ್ದಲದಲ್ಲಿ ಥಿಯೇಟರ್ನ ಗಾಜು ಪುಡಿಯಾಗಿವೆ. ಅಮಿತಾಬ್ ಬಚ್ಚನ್ ಅಭಿನಯದ ಬಾಲಿವುಡ್ನ ‘ಪಿಂಕ್’ ಚಿತ್ರದ ತೆಲುಗು ರಿಮೇಕ್ ಆಗಿರುವ ‘ವಕೀಲ್ ಸಾಬ್’ ಚಿತ್ರದ ಮೂಲಕ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.