ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಭಾನುವಾರ ನೆರವೇರಿತು. ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ವಿಧಿ-ವಿಧಾನ ಪೂರೈಸಿದರು. ಸರ್ಕಾರಿ ಗೌರವದೊಂದಿಗೆ ಪುನೀತ್ ಅವರಿಗೆ ಅಂತಿಮ ವಿದಾಯ ಹೇಳಲಾಯಿತು. ಅಪ್ಪು ಅಮರ ಎಂಬ ಘೋಷಣೆಯೊಂದಿಗೆ ಅಭಿಮಾನಿಗಳು ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು.