ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಪೋಟಕಗಳಿದ್ದ ಎಸ್ಯುವಿ ಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡ(ಎನ್ಐಎ), ತನಿಖೆಯ ಭಾಗವಾಗಿ ಘಟನೆ ನಡೆದ ಸ್ಥಳದಲ್ಲಿ ಕೃತ್ಯದ ಸನ್ನಿವೇಶವನ್ನು ಮರು ಸೃಷ್ಟಿಸಿತು. ‘ಪ್ರಕರಣದ ಆರೋಪಿಯಾಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಘಟನೆ ನಡೆದ ಸ್ಥಳಕ್ಕೆ ಕರೆದೊಯ್ದು, ಅಪರಾಧದ ಸನ್ನಿವೇಶವನ್ನು ಮರು ಸೃಷ್ಟಿಸಲಾಯಿತು. ಈ ವೇಳೆ ತನಿಖಾಧಿಕಾರಿಗಳು ವಾಜೆ ಅವರಿಗೆ ಬಿಳಿ ಕುರ್ತಾ ಧರಿಸಿ ಸ್ವಲ್ಪ ದೂರದವರೆಗೆ ನಡೆದಾಡುವಂತೆ ಸೂಚಿಸಿದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.