ದೆಹಲಿಯಲ್ಲಿ ರೈತರು ನಡೆಸುತ್ತಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಐಟಿಒ ಬಳಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಲಾಠಿಚಾರ್ಜ್ ವೇಳೆ ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಸಂದರ್ಭ ರೈತನೊಬ್ಬ ಅಡ್ಡಾದಿಡ್ಡಿಯಾಗಿ ಟ್ರ್ಯಾಕ್ಟರ್ ಓಡಿಸಿದ್ದು, ಪೊಲೀಸರು ಓಡುವ ದೃಶ್ಯ ಸೆರೆಯಾಗಿದೆ.