ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉದ್ಯಮಿ ಗೌತಮ್ ಅದಾನಿ ಕಂಪನಿಗಳು ಮತ್ತು ವೈಯಕ್ತಿಕ ಸಂಪತ್ತು ಬೃಹತ್ ಪ್ರಮಾಣದಲ್ಲಿ ಏಕೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಅದಾನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರಾಹುಲ್ ದೂರಿದ್ದಾರೆ.