ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮಹಾ ದುರಂತ ಸಂಭವಿಸಿದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಉಸಿರಾಡಲು ಸಾಧ್ಯವಾಗದೆ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾರೆ. ಒಟ್ಟು 24 ಸಾವುಗಳ ಪೈಕಿ, 12 ಸಾವು ಮಾತ್ರ ಆಮ್ಲಜನಕ ಕೊರತೆಯಿಂದ ಆಗಿವೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಮೈಸೂರಿನಿಂದ ಆಕ್ಸಿಜನ್ ಸರಬರಾಜಾಗದೆ ಈ ಸಾವುಗಳ ಸಂಭವಿಸಿವೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ, ಈ ಸಾವುಗಳ ಜವಾಬ್ದಾರಿ ಯಾರದ್ದು? ಚಾಮರಾಜನಗರ ಆಕ್ಸಿಜನ್ ದುರಂತದ ವರದಿ ಇಲ್ಲಿದೆ.