ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ವಿವಿಧ ಇಲಾಖೆಯ ಅಧಿಕಾರಿಗಳ ಮನೆ, ಕಚೇರಿ ಹಾಗೂ ಆಪ್ತರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ವೇಳೆ ಎಸಿಬಿ ಅಧಿಕಾರಿಗಳೇ ಬೆರಗಾಗಿದ್ದು, ಲೋಕೋಪಯೋಗಿ ಇಲಾಖೆ ಜೇವರ್ಗಿ ಉಪ ವಿಭಾಗದ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ ಅವರ ಮನೆಯ ಪೈಪ್ ಕತ್ತರಿಸಿ ₹5 ಲಕ್ಷಕ್ಕೂ ಅಧಿಕ ಮೊತ್ತದ ನೋಟಿನ ಕಟ್ಟುಗಳನ್ನು ಹೊರ ತೆಗೆದಿದ್ದಾರೆ.