ಬೆಂಗಳೂರು: ಬಿಬಿಎಂಪಿ ವತಿಯಿಂದ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಅಭಿವೃದ್ಧಿಪಡಿಸಿರುವ ‘ಮೇಕ್ ಇನ್ ಇಂಡಿಯಾ’ಲಾಂಛನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿ ಹಲವರು ಉಪಸ್ಥಿತರಿದ್ದರು.