ಚಿತ್ರದುರ್ಗ ಜಿಲ್ಲೆಯ ವಿವಿ ಸಾಗರ ಜಲಾಶಯ 89 ವರ್ಷಗಳ ಬಳಿಕ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾದಿನ ಅರ್ಪಣೆ ಮಾಡಿದರು.ತರಹೇವಾರಿ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿ.ವಿ.ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಬಾಗಿನ ಅರ್ಪಿಸಿದರು. ಪುಷ್ಪಾರ್ಚನೆ ಮಾಡಿ, ಹಾಲು ತುಪ್ಪ ಸುರಿದು ಗಂಗೆಗೆ ನಮನ ಸಲ್ಲಿಸಿದರು.